ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬಬಲೇಶ್ವರ ಗ್ರಾಮ ಪಂಚಾಯ್ತಿಯನ್ನ ಸರ್ಕಾರ ಪಟ್ಟಣ ಪಂಚಾಯ್ತಿಗೆ ಮೇಲ್ದರ್ಜೆಗೆ ಏರಿಸಿ ಆದೇಶ ಹೊರಡಿಸಿದೆ. ಈ ಮೂಲಕ ಈ ಭಾಗದ ಜನರ ಬಹುದಿನಗಳ ಕನಸು ನನಸಾಗಿದೆ. ಈ ಬಗ್ಗೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಎ.ವಿಜಯಕುಮಾರ ಆದೇಶ ಹೊರಡಿಸಿದ್ದಾರೆ.
ವಿಜಯಪುರ ತಾಲೂಕಿನ ಬಬಲೇಶ್ವರ ಗ್ರಾಮ ಪಂಚಾಯ್ತಿ ಜೊತೆಗೆ ಅಡವಿ, ಸಂಗಾಪೂರ, ಮಜರೆ ಹಳ್ಳಿಗಳನ್ನ ಒಳಗೊಂಡ ಪ್ರದೇಶವನ್ನ ಪರಿವರ್ತನಾ ಪ್ರದೇಶವೆಂದು ಘೋಷಿಸಿ ಬಬಲೇಶ್ವರ ಪಟ್ಟಣ ಪಂಚಾಯ್ತಿ ಎಂದು ಘೋಷಿಸಲಾಗಿದೆ. ಈ ಬಗ್ಗೆ ಮಾಜಿ ಸಚಿವ, ಶಾಸಕ ಎಂ.ಬಿ ಪಾಟೀಲ ಟ್ವೀಟರ್ ಮೂಲಕ ಸರ್ಕಾರಕ್ಕೆ ಧನ್ಯವಾದಗಳನ್ನ ಸಲ್ಲಿಸಿದ್ದಾರೆ.