ಸರಳವಾಗಿ ಜಗಜೀವನರಾಮ ಜಯಂತಿ

321

ಮಂಡ್ಯ: ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಬಾಬು ಜಗಜೀವನರಾಮ ಅವರ ಜಯಂತಿಯನ್ನ ಅತ್ಯಂತ ಸರಳವಾಗಿ ಆಚರಿಸಲಾಯ್ತು. ಕೃಷ್ಣರಾಜಪೇಟೆ ಪಟ್ಟಣದ ಮಿನಿವಿಧಾನಸೌಧದ ಸಭಾಂಗಣದಲ್ಲಿ ಸರಳವಾಗಿ ಜಯಂತಿ ಆಚರಿಸಲಾಯಿತು.

ಪೌರಾಡಳಿತ, ರೇಷ್ಮೆ ಹಾಗೂ ತೋಟಗಾರಿಕೆ ಸಚಿವ ಡಾ.ನಾರಾಯಣಗೌಡ ಅವರು, ಜಗಜೀವನರಾಮ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರ ಸಾಧನೆಯನ್ನ ಸ್ಮರಿಸಿದ್ರು. ಈ ವೇಳೆ ತಹಶೀಲ್ದಾರ್ ಎಂ. ಶಿವಮೂರ್ತಿ, ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಮೌಳಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಡಾ.ಮನುಕುಮಾರ ಸೇರಿದಂತೆ ಕೆಲವೇ ಕಲವು ಜನ ಭಾಗವಹಿಸಿದ್ರು.




Leave a Reply

Your email address will not be published. Required fields are marked *

error: Content is protected !!