ಬಿಎಸಿ ಸಭೆಗೂ ಕಾಂಗ್ರೆಸ್ ಬಹಿಷ್ಕಾರ

277

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸೋಮವಾರ ಸಿಎಂ ಬಜೆಟ್ ಮಂಡನೆ ವೇಳೆ ಸಭಾತ್ಯಾಗ ಮಾಡಿದ ಕಾಂಗ್ರೆಸ್ ನಾಯಕರು, ಮಂಗಳವಾರ ಸಹ ತಮ್ಮ ಬಹಿಷ್ಕಾರ ಮುಂದುವರೆಸಿದ್ದಾರೆ. ಹೀಗಾಗಿ ಇಂದು ನಡೆದ ಬಿಎಸಿ ಸಭೆಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಗೈರಾದರು.

ಸಭಾಪತಿ ವಿಶ್ವವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿ ನಡೆದ ಕಲಾಪ ಸಲಹಾ ಸಮಿತಿ ಸಭೆಗೆ ಕಾಂಗ್ರೆಸ್ ನಾಯಕರು ಭಾಗವಹಿಸಲಿಲ್ಲ. ಸಿಎಂ ಬಿ.ಎಸ್ ಯಡಿಯೂರಪ್ಪ ಬಂದು 10 ನಿಮಿಷಗಳ ಕಾಲ ಕಾದು ಕುಳಿತರು. ಈ ವೇಳೆ ಮಾತ್ನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಹಿರಿಯರು. ರಾಜಕೀಯ ಕಾರಣಕ್ಕೆ ಸಭೆ ಬಹಿಷ್ಕರಿಸುವುದು ಸರಿಯಲ್ಲ ಎಂದರು.




Leave a Reply

Your email address will not be published. Required fields are marked *

error: Content is protected !!