ನೀತಿ ಸಂಹಿತೆ ಉಲ್ಲಂಘನೆ: ಸಚಿವ ಕೆ.ಸಿ ನಾರಾಯಣಗೌಡ ವಿರುದ್ಧ ಕೇಸ್

221

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ ರಾಜಕೀಯ ಪಕ್ಷಗಳು, ಮುಖಂಡರ ಮೇಲೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ. ಇದೀಗ ಸಚಿವ ಕೆ.ಸಿ ನಾರಾಯಣಗೌಡ ಅವರ ಫೋಟೋ ಇರುವ ಬ್ಯಾಗ್ ಗಳು ಪತ್ತೆಯಾಗಿದ್ದು, ಚಾಮರಾಜಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಿಜೆಪಿ ಚಿಹ್ನೆ ಹಾಗೂ ಸಚಿವ ಕೆ.ಸಿ ನಾರಾಯಣಗೌಡ ಅವರ ಫೋಟೋ ಇರುವ 500 ಬ್ಯಾಗ್ ಗಳನ್ನು ನೋಡಲ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ತಂದಿದ್ದ ಬ್ಯಾಗ್ ಗಳು ಎಂದು ತಿಳಿದು ಬಂದಿದೆ.

ಸಚಿವ ಕೆ.ಸಿ ಎನ್ ಪ್ರತಿನಿಧಿಸುವ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ಬಿಜೆಪಿ ಮುಖಂಡ ಗಂಗಾಧರ್ ಹಾಗೂ ಬ್ಯಾಗ್ ತಯಾರಿಕ ಫ್ಯಾಕ್ಟರಿ ಮಾಲೀಕ ಆಂಥೋಣಿ ಪ್ರಸಾದ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!