ಪ್ರಜಾಸ್ತ್ರ ಸುದ್ದಿ
ಬಾಗೇಪಲ್ಲಿ: ಸಿಪಿಐಎಂ ಪಕ್ಷದಿಂದ ಎರಡು ಬಾರಿ ಶಾಸಕರಾಗಿದ್ದ ಜಿ.ವಿ ಶ್ರೀರಾಮರೆಡ್ಡಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಳಗ್ಗೆ 4 ಗಂಟೆಗೆ ಹೃದಯಾಘಾತವಾಗಿದೆ. ತಕ್ಷಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ಬೆಳಗ್ಗೆ 7.28ಕ್ಕೆ ನಿಧನರಾಗಿದ್ದಾರೆ.
ಪ್ರಗತಿಪರ ಶಾಸಕರಾಗಿದ್ದ ಇವರು ಹಲವು ಚಳವಳಿಗಳಲ್ಲಿ ಭಾಗವಹಿಸಿದ್ದರು. ಇತ್ತೀಚೆಗೆ ಸಪಿಐಎಂ ಪಕ್ಷದ ತೊರೆದು ಪ್ರಜಾ ಸಂಘರ್ಷ ಸಮಿತಿ ರಚನೆ ಮಾಡಿಕೊಂಡಿದ್ದರು. ಇವರ ನಿಧನಕ್ಕೆ ಗಣ್ಯರು, ಅಭಿಮಾನಿಗಳು, ಬೆಂಬಲಿಗರು ಸಂತಾಪ ಸೂಚಿಸಿದ್ದಾರೆ. ಪಟ್ಟಣ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.