ನಾವೆಲ್ಲ ಪ್ರೀತಿ, ವಿಶ್ವಾಸದಿಂದ ಇರಬೇಕು: ಸಿಎಂ ಸಿದ್ದರಾಮಯ್ಯ

141

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವು ಗಣ್ಯರು, ಧಾರ್ಮಿಕ ಮುಖಂಡರು ಭಾಗವಹಿಸಿದ್ದರು.

ಪ್ರಾರ್ಥನೆ ಬಳಿಕ ಮಾತನಾಡಿದ ಸಿದ್ದರಾಮಯ್ಯ, ನಾವೆಲ್ಲ ಬೇರೆ ಧರ್ಮ, ಜಾತಿಗೆ ಸೇರಿದ್ದರೂ ಪ್ರೀತಿ, ವಿಶ್ವಾಸದಿಂದ ಇರಬೇಕು. ದ್ವೇಷ ಹುಟ್ಟು ಹಾಕುವ ಶಕ್ತಿಗಳಿವೆ. ಇದಕ್ಕೆ ನಾವು ಮಹತ್ವ ಕೊಡದೆ ಮನುಷ್ಯರಾಗಿ ಬಾಳಬೇಕು ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!