ಬಕ್ರೀದ್ ಹಬ್ಬ: ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ

225

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇದೆ ಜುಲೈ 21ರಂದು ಎಲ್ಲೆಡೆ ಬಕ್ರೀದ್ ಹಬ್ಬ ಆಚರಣೆ ಮಾಡಲಾಗ್ತಿದೆ. ಈ ವೇಳೆ ಮುಸ್ಲಿಂ ಬಾಂಧವರು ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿಕೊಂಡು ಬರ್ತಿದ್ದಾರೆ. ಆದ್ರೆ, ಈ ಬಾರಿ ಕೋವಿಡ್ 19 ಸೋಂಕಿನಿಂದಾಗಿ ಸಾಮೂಹಿಕ ಪ್ರಾರ್ಥನೆಗೆ ಸರ್ಕಾರ ನಿರ್ಬಂಧ ಹೇರಿದೆ.

ಮಸೀದಿಗಳಲ್ಲಿ 50 ಜನರು ಮಾತ್ರ ಪ್ರಾರ್ಥನೆಗೆ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಅಲ್ಪ ಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆಯ ಅಧೀನ ಕಾರ್ಯದರ್ಶಿ ಮುಕ್ತಾರ ಪಾಷಾ ಹೆಚ್.ಜಿ ನಡುವಳಿಗಳನ್ನ ಹೊರಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಕೋವಿಡ್ 3ನೇ ಅಲೆ ಬರುವ ಸಾಧ್ಯತೆಯಿದ್ದು, ಸಾಮೂಹಿಕ ಪ್ರಾರ್ಥನೆಗೆ ನಿಷೇಧ ಹೇರಲಾಗಿದೆ ಎಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!