ಪ್ರಜಾಸ್ತ್ರ ಸುದ್ದಿ
ಹಾಸನ: ಬಾಳೆಹೊನ್ನೂರು ಶಾಖಾ ಮಠದ ಸ್ವಾಮೀಜಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗ್ತಿದೆ. 50 ವರ್ಷದ ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ವಾಮೀಜಿಯ ಸಾವು ನಿಗೂಢವಾಗಿದೆ. ಮಂಗಳವಾರ ರಾತ್ರಿ ತಮ್ಮ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗ್ತಿದೆ. ಬೆಳಗ್ಗೆ ವ್ಯಕ್ತಿಯೊಬ್ಬ ಕೋಣೆಗೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಆಲೂರು ಠಾಣೆ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ.