ಶ್ರೀರಾಮುಲು ಉಮೇದುವಾರಿಕೆ ಸಲ್ಲಿಕೆ

66

ಪ್ರಜಾಸ್ತ್ರ ಸುದ್ದಿ

ಬಳ್ಳಾರಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಶುಕ್ರವಾರ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿ ತನಕ ಮೆರವಣಿಗೆ ಮೂಲಕ ಆಗಮಿಸಿದರು.

ಜಿಲ್ಲಾಧಿಕಾರಿ ಹಾಗೂ ಚುನವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಈ ವೇಳೆ ಪತ್ನಿ ಭಾಗ್ಯಲಕ್ಷ್ಮಿ, ಮಕ್ಕಳು, ಸ್ನೇಹಿತ, ಶಾಸಕ ಜನಾರ್ಧನ್ ರೆಡ್ಡಿ ಪತ್ನಿ ಅರುಣಾ , ಮಾಜಿ ಸಚಿವ ಆನಂದ್ ಸಿಂಗ್ ಸೇರಿ ಇತರರು ಸಾಥ್ ನೀಡಿದರು.




Leave a Reply

Your email address will not be published. Required fields are marked *

error: Content is protected !!