ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಕುಂದಾನಗರಿಯಲ್ಲಿ ಎಂಇಎಸ್ ಪುಂಡರ ಹಾವಳಿ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿದ್ದುಕೊಂಡು ಕನ್ನಡಿಗರ ವಿರುದ್ಧ, ಕನ್ನಡ ನೆಲದ ವಿರೋಧಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿರುವ ಪುಂಡರು ಮಧ್ಯರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಹಾನಿಗೊಳಿಸಿದ್ದಾರೆ.
ಬೆಂಗಳೂರಿನ ಶಿವಾಜಿನಗರದಲ್ಲಿರುವ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಹಚ್ಚಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಪುಂಡಾಟಿಕೆ ನಡೆಸಿದ್ದಾರೆ. ಬೆಳಗಾವಿಯ ಕನಕದಾಸ ಕಾಲೋನಿಯಲ್ಲಿರುವ ರಾಯಣ್ಣನ ಪ್ರತಿಮೆಗೆ ಹಾನಿ ಮಾಡಿದ್ದಾರೆ. 20ಕ್ಕೂ ಹೆಚ್ಚು ಬಸ್ ಗಳಿಗೆ ಹಾನಿ ಮಾಡಲಾಗಿದೆ, 12 ಸರ್ಕಾರಿ ವಾಹನಗಳು ಜಖಂ ಆಗಿವೆ.
ಎಂಇಎಸ್ ಸಂಘಟನೆಯನ್ನು ಸರ್ಕಾರ ಕೂಡಲೇ ಬ್ಯಾನ್ ಮಾಡಬೇಕು. ನಾಡದ್ರೋಹಿಗಳನ್ನು ಗಡಿಪಾರು ಮಾಡಬೇಕು. ಬೆಳಗಾವಿ ಎಂದಿಗೂ ಕರ್ನಾಟಕಕ್ಕೆ ಸೇರಿದ್ದು, ಈ ಪುಂಡರು ಎಷ್ಟೇ ಹಾರಾಟ, ಕೂಗಾಟ ನಡೆಸಿದರೂ ಅವರ ನೀಚಕೃತ್ಯ ಎಂದು ನಡೆಯಲ್ಲವೆಂದು ಕನ್ನಡ ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.