ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಸಚಿವರು ಮತ್ತೆ ತಮ್ಮ ಎಂದಿನ ಚಾಳಿ ಶುರು ಮಾಡಿದ್ದಾರೆ. ಹೀಗಾಗಿ ಒಂದಿಷ್ಟು ಗಲಾಟೆ ನಡೆದಿದೆ. ಈ ಹೊತ್ತಿನಲ್ಲಿ ಡಿಸೆಂಬರ್ 6ರಂದು ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಭೇಟಿ ನೀಡುತ್ತೇವೆ ಎಂದಿದ್ದರು. ಆದರೆ, ರಾಜ್ಯ ಸರ್ಕಾರ ಅವರ ಪ್ರವೇಶಕ್ಕೆ ನಿಷೇಧ ಹೇರಿದ್ದರಿಂದ ರದ್ದುಗೊಂಡಿದೆ.
ಮಹಾರಾಷ್ಟ್ರದ ಉನ್ನತ ಮತ್ತು ತಾಂತ್ರಿಕ ಶಿಕ್ಷಣ, ಜವಳಿ ಮತ್ತು ಸಂಸದೀಯ ಸಚಿವ ಚಂದ್ರಕಾಂತ ಪಾಟೀಲ, ಅಬಕಾರಿ ಸಚಿವ ಶಂಬುರಾಜ ದೇಸಾಯಿ, ಸಂಸದ ಧೈರ್ಯಶೀಲ ಅವರು ಬೆಳಗಾವಿಗೆ ಭೇಟಿ ಕೊಟ್ಟು ಪ್ರಚೋದನಕಾರಿ ಭಾಷಣ ಮಾಡಿ ಭಾಷಾ ವೈಷಮ್ಯ ಬೆಳೆಸುತ್ತಾರೆ. ಸಾರ್ವಜನಿಕರ ಆಸ್ತಿ ಹಾನಿಯ ಜೊತೆಗೆ ಕಾನೂನು ಸುವ್ಯವಸ್ಥೆಗೆ ದಕ್ಕೆ ತರುತ್ತಾರೆ ಎಂದು ಅವರ ಭೇಟಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ನಿಷೇಧಿಸಿ ಆದೇಶಿಸಿದ್ದಾರೆ.