ಸಿಎಂ ಮಮತಾಗೆ ಗಾಯವಾಗಿರುವುದು ಖಚಿತಪಡಿಸಿದ ವೈದ್ಯರು

266

ಪ್ರಜಾಸ್ತ್ರ ಸುದ್ದಿ

ಕೊಲ್ಕೊತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಕಾವು ಜೋರಾಗಿದೆ. ಟಿಎಂಸಿ ಹಾಗೂ ಬಿಜೆಪಿ ನಡುವಿನ ಗುದ್ದಾಟ ಜೋರಾಗಿದೆ. ಇದರ ನಡುವೆ ಬುಧವಾರ ಸಂಜೆ ನಂದಿಗ್ರಾಮದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರ ಮೇಲೆ ಅಪರಿಚಿತರು ಹಲ್ಲೆ ಮಾಡಿದ್ದಾರೆ. ಈ ಸಂಬಂಧ ಅವರನ್ನ ಎಸ್ಎಸ್ ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ದೀದಿಗೆ ಪಾದ ಹಾಗೂ ಭುಜದ ಮೂಳೆ ಮುರಿದಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಪ್ರಾಥಮಿಕ ಪರೀಕ್ಷೆಯಲ್ಲಿ ಬಲ ಭುಜ, ಮುಂಗೈ, ಪಾದ ಹಾಗೂ ಕುತ್ತಿಗೆಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಮುಂದಿನ 48 ಗಂಟೆಗಳ ಕಾಲ ನಿಗಾದಲ್ಲಿ ಇಡಲಾಗಿದೆ. ಈ ಘಟನೆ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.




Leave a Reply

Your email address will not be published. Required fields are marked *

error: Content is protected !!