ಪ್ರತಾಪ್ ರೆಡ್ಡಿ ಬೆಂಗಳೂರು ಪೊಲೀಸ್ ಕಮಿಷನರ್

484

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಕಮಲ್ ಪಂತ್ ಅವರನ್ನು ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಆಗಿ ವರ್ಗಾವಣೆ ಮಾಡಿದೆ.

ಕೆಎಸ್ಆರ್ ಪಿ ಎಡಿಜಿಪಿ ಆಗಿದ್ದ ಅಲೋಕ್ ಕುಮಾರ್ ಅವರನ್ನು ರಾಜ್ಯದ ಕಾನೂನು ಸುವ್ಯಸ್ಥೆ ವಿಭಾಗದ ಎಡಿಜಿಪಿ ಆಗಿ ವರ್ಗಾಯಿಸಲಾಗಿದೆ. ಇವರ ಜಾಗಕ್ಕೆ ಪೊಲೀಸ್ ತರಬೇತಿ ವಿಭಾಗದ ಪ್ರಭಾರ ಎಡಿಜಿಪಿ ಆಗಿದ್ದ ಆರ್.ಹಿತೇಂದ್ರ ಅವರನ್ನು ವರ್ಗಾಯಿಸಲಾಗಿದೆ. ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್ ಅನುಚೇತ್ ಅವರನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಅವರ ಜಾಗಕ್ಕೆ ಇನ್ನೂ ಯಾರನ್ನೂ ನೇಮಿಸಿಲ್ಲ.




Leave a Reply

Your email address will not be published. Required fields are marked *

error: Content is protected !!