ಕಾಲೇಜು ವಿದ್ಯಾರ್ಥಿ ಹತ್ಯೆ ಪ್ರಕರಣ, ಇಬ್ಬರ ಬಂಧನ

162

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಂಗಳೂರು: ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಖಾಸಗಿ ಕಾಲೇಜುವೊಂದರಲ್ಲಿ ನಡೆದ ಗಲಾಟೆಯಲ್ಲಿ ವಿದ್ಯಾರ್ಥಿಯೊಬ್ಬನ ಹತ್ಯೆ ನಡೆದಿತ್ತು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಅನಿಲ್ ಹಾಗೂ ಶೃಂಗ ಬಂಧಿತ ಆರೋಪಿಗಳು.

ಕಳೆದ ಏಪ್ರಿಲ್ 28ರಂದು ಕಾಲೇಜು ಫೆಸ್ಟಿವಲ್ ನಡೆದಿದೆ. ಅಂದು ಕಾಲೇಜು ವಿದ್ಯಾರ್ಥಿ ಭರತೇಶ್ ಸ್ನೇಹಿತನ ಅತ್ತೆ ಮಗಳ ಮೇಲೆ ಶರತ್ ಎಂಬಾತ ಬಾಲ್ ಎಸೆದಿದ್ದಾನೆ. ಇದೆ ವಿಚಾರವಾಗಿ ಭರತೇಶ್ ಗುಂಪು ಹಾಗೂ ಶರತ್, ಇತನ ಸ್ನೇಹಿತ ಭಾಸ್ಕರ್ ಜೆಟ್ಟಿ ಜೊತೆ ಜಗಳವಾಗಿದೆ.

ಈ ಪ್ರಕರಣಕ್ಕೆ ಸಂಬಂಧವೇ ಇರದ ಅನಿಲ್ ಏಕಾಏಕಿ ಭಾಸ್ಕರ್ ಜೆಟ್ಟಿ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ. ಇದರಿಂದ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಪೊಲೀಸರು ಮೊದಲು ಭರತೇಶನನ್ನು ವಶಕ್ಕೆ ಪಡೆದಿದ್ದಾರೆ. ನಂತರ ಆರೋಪಿಗಳ ಸ್ನೇಹಿತನ ಫೋನ್ ಜಾಡು ಹಿಡಿದು ಮೂಡಿಗೆರೆಯ ಅರಣ್ಯ ಪ್ರದೇಶದಲ್ಲಿ ತಲೆಮರೆಸಿಕೊಂಡವರನ್ನು ಬಂಧಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!