ಗ್ರಾಮೀಣ ಬ್ಯಾಂಕಿನಲ್ಲಿ 5 ಕೆಜಿ ಚಿನ್ನಾಭರಣ, 14 ಲಕ್ಷ ರೂಪಾಯಿ ದರೋಡೆ

157

ಪ್ರಜಾಸ್ತ್ರ ಅಪರಾಧ ಸುದ್ದಿ

ದೇವನಹಳ್ಳಿ: ಶನಿವಾರ ತಡರಾತ್ರಿ ಹೊಸಹಳ್ಳಿ ಗ್ರಾಮದಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕಿನಲ್ಲಿ ಕಳ್ಳತನ ನಡೆದಿದ್ದು, ಬರೋಬ್ಬರಿ ಮೂರುವರೆ ಕೋಟಿ ಮೌಲ್ಯದ ಚಿನ್ನಾಭರಣ ದೋಚಲಾಗಿದೆ. ಭಾನುವಾರ ಮುಂಜಾನೆ ಈ ಪ್ರಕರಣ ಬೆಳಕಿಗೆ ಬಂದಿದೆ.

ಮುಖಕ್ಕೆ ಮಂಕಿ ಕ್ಯಾಪ್ ಹಾಕಿಕೊಂಡು ಬ್ಯಾಂಕಿಗೆ ನುಗ್ಗಿದ ಕಳ್ಳರು, ಗ್ಯಾಸ್ ಕಟರ್ ಮೂಲಕ ಒಳಗೆ ಪ್ರವೇಶ ಮಾಡಿದ್ದಾರೆ. ಮೂರುವರೆ ಕೋಟಿ ಮೌಲ್ಯದ 5 ಕೆಜಿ ಚಿನ್ನಾಭರಣ, 14 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.




Leave a Reply

Your email address will not be published. Required fields are marked *

error: Content is protected !!