ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಕುವೆಂಪು ಅವರ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಂದು ರೀತಿಯ ರಾಜಕೀಯ ನಡೆಯುತ್ತಿದೆ. ಈ ಬಗ್ಗೆ ಶಿಕ್ಷಣ ಸಚಿವರು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದ್ದು, ಬರಗೂರು ರಾಮಚಂದ್ರಪ್ಪನವರು ಮತ್ತೊಂದು ದಾಖಲೆ ನೀಡಿದ್ದಾರೆ.
ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿಕೆಗೆ ಬರಗೂರು ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅದಕ್ಕೆ ಸ್ಪಷ್ಟನೆ ಸಹ ನೀಡಿದ್ದಾರೆ. ಮಂಗಳವಾರ ಒಂದು ಪ್ರಕಟಣೆ ನೀಡಿದ್ದ ಬರಗೂರು ರಾಮಚಂದ್ರಪ್ಪನವರು ಇಂದು ಮತ್ತೊಂದು ದಾಖಲೆ ನೀಡಿದ್ದಾರೆ.