ಪ್ರಜಾಸ್ತ್ರ ಸುದ್ದಿ
ಬಾಗಲಕೋಟೆ: ಬಸನಗೌಡ ಪಾಟೀಲ್ ಯತ್ನಾಳ್ ಮೊನ್ನೆ ದೆಹಲಿಗೆ ಹೋಗಿ ಶೋಭಾ ಕರಂದ್ಲಾಜೆ ಕಾಲಿಗೆ ಬಿದ್ದು ಬಂದಿದ್ದೇಕೆ? ಯಡಿಯೂರಪ್ಪ, ತಮ್ಮನ್ನುಒಂದು ಮಾಡಿ ಎಂದು ಕಾಲಿಗೆ ಬಿದ್ದು ಬಂದಿಲ್ವಾ ಎಂದು ಸ್ವಪಕ್ಷೀಯ ಸಚಿವ ಮುರುಗೇಶ್ ನಿರಾಣಿ ಪ್ರಶ್ನಿಸುವ ಮೂಲಕ ತಿರುಗೇಟು ನೀಡಿದ್ದಾರೆ.
ನಿರಾಣಿಯವರು ಬಿಜೆಪಿ ಟಿಕೆಟ್ ಗಾಗಿ ನನ್ನ ಮನೆ ಕಾಯುತ್ತಿದ್ದರು ಎಂದು ಯತ್ನಾಳ್ ಹೇಳಿದ್ದರು. ಈ ಕುರಿತು ಬಾಗಲಕೋಟೆ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ, ನಾನು ಹೋಗಿ ಟಿಕೆಟ್ ಕೇಳಿರಬಹುದು. ನಾನು ಸಾಕಷ್ಟು ಜನರ ಮನೆ ಬಾಗಿಲಿಗೆ ಹೋಗಿದ್ದೇನೆ. ಇವರ ಮನೆಗೂ ಹೋಗಿರಬಹುದು. ಯಾಕಂದರೆ, ನಾನು ಅಷ್ಟು ದೊಡ್ಡ ವ್ಯಕ್ತಿ ಅಲ್ಲ ಎಂದು ಟಾಂಟ್ ಕೊಟ್ಟರು.
ಇವರು ಟಿಕೆಟ್ ಗಾಗಿ, ಮಂತ್ರಿಗಾಗಿ ಯಾರ್ಯಾರ ಮನೆ ಬಾಗಿಲಿಗೆ ಹೋಗಿದ್ದಾರೆ. ಯಾರ್ಯಾರ ಕಾಲಿಗೆ ಬಿದ್ದಿದ್ದಾರೆ ಅನ್ನೋದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.