ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬಿ.ಎಸ್ ಯಡಿಯೂರಪ್ಪನವರಿಂದ ತೆರವಾದ ಸಿಎಂ ಸ್ಥಾನಕ್ಕೆ ನೂತನವಾಗಿ ಬಸವರಾಜ ಬೊಮ್ಮಾಯಿ ಅವರನ್ನ ಆಯ್ಕೆ ಮಾಡಲಾಗಿದೆ. ನಗರದ ಕ್ಯಾಪಿಟಲ್ ಹೋಟೆಲ್ ನಲ್ಲಿ ನಡೆದ ಬಿಎಲ್ ಪಿ ಸಭೆಯಲ್ಲಿ ಸರ್ವಸಮ್ಮತದಿಂದ ಬಸವರಾಜ ಬೊಮ್ಮಾಯಿ ಅವರನ್ನ ಶಾಸಕಾಂಗ ಪಕ್ಷದ ನಾಯಕ ಎಂದು ಆಯ್ಕೆ ಮಾಡಲಾಗಿದೆ.
ಕೇಂದ್ರದಿಂದ ವೀಕ್ಷಕರಾಗಿ ಬಂದಿರುವ ಸಚಿವರಾದ ಧರ್ಮೇಂದ್ರ ಪ್ರಧಾನ್, ಕಿಸಾನ್ ರೆಡ್ಡಿ, ಹಂಗಾಮಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ, ಜಗದೀಶ ಶೆಟ್ಟರ್, ಆರ್.ಅಶೋಕ, ಅಶ್ವಥನಾರಾಯಣ, ಶಾಸಕ ಎಂ.ಪಿ ರೇಣುಕಾಚಾರ್ಯ ಸೇರಿದಂತೆ 90 ಶಾಸಕರು ಹಾಜರಿದ್ದು, ಬೊಮ್ಮಾಯಿ ಅವರನ್ನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ನಾಳೆಯೇ ನೂತನ ಸಿಎಂ ಪ್ರಮಾಣ ವಚನ ಎಂದು ತಿಳಿದು ಬಂದಿದೆ.
ಸಿಎಂ ಆಗಿ ಬೊಮ್ಮಾಯಿ ಹೆಸರನ್ನ ಯಡಿಯೂರಪ್ಪನವರು ಅನುಮೋದಿಸಿದ್ದು, ಗೋವಿಂದ ಕಾರಜೋಳ ಪ್ರಸ್ತಾಪ ಮಾಡಿದ್ದು ಎಂದು ತಿಳಿದು ಬಂದಿದೆ.