ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿಧಾನಸಭೆ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ಆರ್.ಟಿ ನಗರದಲ್ಲಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರ ನಿವಾಸದಲ್ಲಿ ಬಿಜೆಪಿ ಸೇರಿದರು.
ಹೊರಟ್ಟಿ ಬಿಜೆಪಿ ಸೇರ್ಪಡೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಮತ್ತಷ್ಟು ಶಕ್ತಿ ಬರಲಿದೆ. ಅವರೊಬ್ಬರ ಉತ್ತಮ ಸಂಸದೀಯ ಪಟು ಎಂದು ಸಿಎಂ ಬೊಮ್ಮಾಯಿ ಹೇಳಿದರು. ಅವರ ಸೇರ್ಪಡೆ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಪರಿಹರಿಸಿಕೊಳ್ಳಲಾಗುವುದು ಎಂದರು.
ಈ ವೇಳೆ ಸಚಿವರಾದ ಸಿ.ಸಿ ಪಾಟೀಲ, ಆರ್.ಅಶೋಕ, ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಶಾಸಕರಾದ ಜಗದೀಶ್ ಶೆಟ್ಟರ್, ಎಂ.ಪಿ ರೇಣುಕಾಚಾರ್ಯ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸೇರಿ ಅನೇಕರಿದ್ದರು.