ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಚಿತ್ರದುರ್ಗ: ಮುರುಘಾ ಮಠದಿಂದ ನೀಡಲಾಗುವ ಬಸವಶ್ರೀ ಪ್ರಶಸ್ತಿ ಈ ಬಾರಿ ದಿವಂಗತ ನಟ ಡಾ.ಪುನೀತ್ ರಾಜಕುಮಾರ್ ಅವರಿಗೆ ನಾಳೆ ಮರಣೋತ್ತರವಾಗಿ ಪ್ರದಾನ ಮಾಡಲಾಗುತ್ತಿದೆ. ಪುನೀತ್ ಪತ್ನಿ ಅಶ್ವಿನಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಮಠದ ಅನುಭವ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ. ಡಾ.ಶಿವಮೂರ್ತಿ ಮುರುಘಾ ಶರಣರು ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯ ಅತಿಥಿಯಾಗಿದ್ದಾರೆ. ಸಚಿವ ಬಿ.ಸಿ ಪಾಟೀಲ, ಶಾಸಕ ತಿಪ್ಪಾರೆಡ್ಡಿ, ನಟರಾದ ಡಾ.ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್ ಉಪಸ್ಥಿತಿ ಇರಲಿದ್ದಾರೆ.
ಹಿರಿಯ ಸಾಹಿತಿ, ನಾಟಕಕಾರ ರಾಜಪ್ಪ ದಳವಾಯಿ ಅವರು ಪ್ರಶಸ್ತಿ ಪುರಸ್ಕೃತರ ಕುರಿತು ಮಾತನಾಡಲಿದ್ದಾರೆ.