ಪ್ರಜಾಸ್ತ್ರ ಅಪರಾಧ ಸುದ್ದಿ
ಬೆಂಗಳೂರು: ಬಿಬಿಎಂಪಿಯ 138ನೇ ವಾರ್ಡಿನ ಮಾಜಿ ಸದಸ್ಯೆ ರೇಖಾ ಕದಿರೇಶ ಅವರನ್ನ ಗುರುವಾರ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಕೊಲೆ ಮಾಡಿದ್ದಾರೆ. ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನಲ್ಲಿರುವ ಮನೆಯೇ ಮುಂದೆಯೇ ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಲಾಗಿದೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ರೇಖಾ ಅವರನ್ನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕಲಿಲ್ಲ. ಕಾಟನ್ ಪೇಟೆ ಪೊಲೀಸರು ಹಾಗೂ ಚಿಕ್ಕಪೇಟೆ ಎಸಿಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
2018ರಲ್ಲಿ ರೇಖಾ ಪತಿ ಕದರೀಶನನ್ನ ಆಟೋದಲ್ಲಿ ಬಂದ ದುಷ್ಕರ್ಮಿಗಳು, ಮನೆ ಹತ್ತಿರದ ಮುನೇಶ್ವರ ದೇವಸ್ಥಾನದ ಬಳಿ ಸಾರ್ವಜನಿಕರ ಎದುರೆ ಹತ್ಯೆ ಮಾಡಿದ್ದರು. ಇದೀಗ ಪತ್ನಿಯನ್ನ ಹತ್ಯೆ ಮಾಡಿದ್ದಾರೆ.