ಕೊಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ ಗಂಗೂಲಿ ಅವರು ಭಾರತ ಲಾಕ್ ಡೌನ್ ಆಗಿರುವ ಹೊತ್ತಿನಲ್ಲಿ ಸಾಮಾಜಿಕ ಸೇವೆಗೆ ಮುಂದಾಗಿದ್ದಾರೆ. ಬಡ ಜನರಿಗಾಗಿ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಅಕ್ಕಿ ವಿತರಣೆ ಮಾಡಲು ಮುಂದೆ ಬಂದಿದ್ದಾರೆ.
ಕರೋನಾದಿಂದಾಗಿ ಮುಂಜಾಗ್ರತ ಕ್ರಮವಾಗಿ ಸರ್ಕಾರಿ ಶಾಲೆಯಲ್ಲಿ ವ್ಯವಸ್ಥೆ ಮಾಡಿರುವ ಬಡವರಿಗೆ ಅಕ್ಕಿ ವಿತರಿಸಲು ದಾದಾ ತೀರ್ಮಾನಿಸಿದ್ದಾರೆ. ಇದೇ ರೀತಿ ಪಶ್ಚಿಮ ಬಂಗಾಳ ಕ್ರಿಕೆಟ್ ಮಂಡಳಿ, ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿ ನೀಡುವುದಾಗಿ ಅಧ್ಯಕ್ಷ ಅವಿಷೇಕ್ ದಾಲ್ಮಿಯಾ ಪ್ರಕಟಿಸಿದ್ದಾರೆ.
ಇನ್ನು ಇಡೀ ದೇಶ ಲಾಕ್ ಡೌನ್ ಆಗಿದೆ. ದಯವಿಟ್ಟು ಯಾರೂ ಮನೆಯಿಂದ ಹೊರಗೆ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಕರೋನಾ ಸೋಲಿಸಲು ಇದೊಂದೇ ದಾರಿಯಾಗಿದ್ದು, ಆರೋಗ್ಯ ಇಲಾಖೆಯ ನಿಯಮ ಪಾಲಿಸಿ ಎಂದಿದ್ದಾರೆ.