ಸಿಲಿಕಾನ್ ಸಿಟಿಯ ಈ 4 ಕ್ಷೇತ್ರಗಳ ಮೇಲೆ ಎಲ್ಲರ ಕಣ್ಣು

313

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆಯ ಕಾವು ಜೋರಾಗುತ್ತಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು 15 ವಿಧಾನಸಭಾ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಅದರಲ್ಲೂ ಸಿಲಿಕಾನ್ ಸಿಟಿಯ ಈ ನಾಲ್ಕು ಕ್ಷೇತ್ರಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ಸಿಎಂ ಬಿಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಜಗದೀಶ ಶೆಟ್ಟರ್, ಹೆಚ್.ಡಿ ಕುಮಾರಸ್ವಾಮಿ, ಡಿ.ವಿ ಸದಾನಂದಗೌಡ, ಎಸ್.ಎಂ ಕೃಷ್ಣ ಅವರು ಈ ನಾಲ್ಕು ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆಸ್ತಿದ್ದಾರೆ. ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಕೆ.ಆರ್ ಪುರ ಹಾಗೂ ಶಿವಾಜಿನಗರ ಕಣಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಈ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿಲ್ಲ. ಈಗ ಬಿಜೆಪಿಯಿಂದ ಸ್ಪರ್ಧಿಸಿರುವವರು ಸಹ ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಬಂದ ಅಭ್ಯರ್ಥಿಗಳು. ಹೀಗಾಗಿ ಬಿಜೆಪಿ ಈ ಕ್ಷೇತ್ರಗಳಲ್ಲಿ ತನ್ನ ಬಾವುಟ ನಡೆಲು ನೋಡ್ತಿದೆ. ಕಾಂಗ್ರೆಸ್ ತನ್ನ ಪಾರುಪತ್ಯ ಉಳಿಸಿಕೊಳ್ಳಲು ನೋಡ್ತಿದೆ. ಜೆಡಿಎಸ್ ಇವರಿಬ್ಬರಿಗೂ ಠಕ್ಕರ್ ಕೊಡಲು ಪ್ಲಾನ್ ಮಾಡಿದ್ದು ಭಾರೀ ಪ್ರಚಾರ ಕಾರ್ಯ ನಡೆಸಿದೆ.




Leave a Reply

Your email address will not be published. Required fields are marked *

error: Content is protected !!