ಬಿಫೋರ್ ಜಾಯ್ ಚಂಡಮಾರುತ, ಈ ರಾಜ್ಯಗಳು ತತ್ತರ

199

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಿಫೋರ್ ಜಾಯ್ ಚಂಡಮಾರುತ ದೇಶದ ಹಲವು ರಾಜ್ಯಗಳಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಅನಾಹುತ ಸೃಷ್ಟಿಸಿದೆ. ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದೆ.

ಗುಜರಾತಿನ 8 ಜಿಲ್ಲೆಗಳಲ್ಲಿ ಚಂಡಮಾರತು ಅನಾಹುತ ಸೃಷ್ಟಿಸಿದೆ. 37 ಸಾವಿರಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಅನೇಕ ಕಡೆ ಸಮುದ್ರದ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿದೆ.

ಇನ್ನು ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿಯೂ ಬಿಫೋರ್ ಜಾಯ್ ಚಂಡಮಾರುತ ತನ್ನ ಆರ್ಭಟ ತೋರಿಸಿದೆ. ಮುಂದಿನ ಎರಡ್ಮೂರು ದಿನಗಳ ಇದರ ಪರಿಣಾಮ ಹೆಚ್ಚಾಗಲಿದೆ‌. ಕರ್ನಾಟಕದ ಕರಾವಳಿ ಭಾಗದಲ್ಲಿ ಮುನ್ನೆಚ್ಚರಿಕೆ ನೀಡಿದ್ದು, ಮುಂಜಾಗ್ರತೆಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.




Leave a Reply

Your email address will not be published. Required fields are marked *

error: Content is protected !!