ಬೆಳಗಾವಿ: ಕುಂದಾನಗರಿ ಬೆಳಗಾವಿಯ 3 ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಗೋಕಾಕ ರಮೇಶ ಜಾರಕಿಹೊಳಿ, ಅಥಣಿ ಮಹೇಶ ಕುಮಟಳ್ಳಿ ಹಾಗೂ ಕಾಗವಾಡದಲ್ಲಿ ಶ್ರೀಮಂತ ಪಾಟೀಲ ಗೆದ್ದು ಬೀಗಿದ್ದಾರೆ.
ಡಿಸಿಎಂ ಲಕ್ಷ್ಮಣ ಸವದಿ ನೇತೃತ್ವದಲ್ಲಿ ನಡೆದ ಹಣಾಹಣಿಯಲ್ಲಿ ಗೆದ್ದು ತೋರಿಸಿದ್ದಾರೆ. ಮೇಲಾಗಿ ಜಾರಕಿಹೊಳಿ ಬ್ರದರ್ಸ್ ನಡುವೆ ನೇರಾನೇರ ಫೈಟ್ ನಡೆದಿತ್ತು. ಇದರಲ್ಲಿ ಸತೀಶ ಹಾಗೂ ಲಖನ ಜಾರಕಿಹೊಳಿಗೆ ಭಾರೀ ಮುಖಭಂಗವಾಗಿದೆ.