ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರು ರೋಚಕ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿಗೆ ಸೋಲು ಆಗಿದೆ.
ಸುರೇಶ ಅಂಗಡಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಏಪ್ರಿಲ್ 17ರಂದು ಮತದಾನ ನಡೆದಿತ್ತು. ಭಾನುವಾರ ಫಲಿತಾಂಶ ಬಂದಿದ್ದು, ಸುರೇಶ ಅಂಗಡಿ ಪತ್ನಿ ಮಂಗಳಾ ಅಂಗಡಿ ವಿಜಯ ಸಾಧಿಸಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಬಿಜೆಪಿ 1 ವಿಧಾನಸಭೆ ಹಾಗೂ 1 ಲೋಕಸಭೆಯಲ್ಲಿ ಗೆಲುವು ಸಾಧಿಸಿದೆ.