ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಕೇಂದ್ರ ಬಿಜೆಪಿ ತಂಡ ಆಗಮಿಸಿದೆ. ಕಾಕತಿ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ವಿಜಯಕುಮಾರ್ ಸಿನ್ನೂರ ಅವರನ್ನು ಅಮಾನತುಗೊಳಿಸಲಾಗಿದೆ.
ಈ ಘಟನೆ ಸಂಬಂಧ ಕೇಂದ್ರದ ಬಿಜೆಪಿ ತಂಡ ಬಂದಿದೆ. ಸಂಸದರಾದ ಅಫ್ರಜಿತ್ ಸಾರಂಗಿ, ಸುನಿತಾ ದುಗ್ಗಲ್, ಲಾಕೆಟ್ ಚಟರ್ಜಿ, ರಂಜಿತಾ ಕೋಲಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರಾ ಆಗಮಿಸಿದ್ದು, ಮಹಿಳೆಯಿಂದ ಮಾಹಿತಿ ಪಡೆಯುತ್ತಿದ್ದಾರೆ.