ಬೆಳಗಾವಿ: ಪ್ರವಾಹದಿಂದ ಮನೆ ಕಳೆದುಕೊಂಡ ಜನಕ್ಕೆ ಮನೆ ಕಟ್ಟಿ ಕೊಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಅಲ್ದೇ ಆಸ್ತಿ ಕಳೆದುಕೊಂಡವರಿಗೆ ಪರಿಹಾರ ನೀಡಲಾಗುವುದು. ಮೃತಪಟ್ಟ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ನೀಡಲಾಗುವುದು ಅಂತಾ ಹೇಳಿದ್ದಾರೆ.
ಬೆಳಗಾವಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಅವರು, ರಾಜ್ಯದಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿಯನ್ನ ಸರಿಯಾಗಿ ನಿಭಾಯಿಸಲಾಗುವುದು ಅಂತಾ ತಿಳಿಸಿದ್ರು. ಜಗದೀಶ ಶೆಟ್ಟರ್, ಸಿ.ಎಂ ಉದಾಸಿ, ಕೋಟಾ ಶ್ರೀನಿವಾಸ ಪೂಜಾರಿ, ಈಶ್ವರಪ್ಪ, ಶೋಭಾ ಕಂರದ್ಲಾಜೆ, ಬಿ.ವೈ ರಾಘವೇಂದ್ರ ನೇತೃತ್ವದ ಟೀಂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಹಾರ ಕಾರ್ಯಚರಣೆ ನಡೆಸಲು ಸೂಚಿಸಲಾಗಿದೆ ಅಂತಾ ಹೇಳಿದ್ರು.
ಇನ್ನು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ನಡೆಸಲು ಹೆಲಿಕಾಪ್ಟರ್ ಒದಗಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಿಗೆ ಕೇಳಿಕೊಂಡಿದ್ದು, ವಿಶೇಶಾ ರಕ್ಷಣಾ ಮತ್ತು ಪರಿಹಾರ ತಂಡ ಇಂದು ಸಂಜೆ ಬೆಳಗಾವಿಗೆ ಆಗಮಿಸುವ ಸಾಧ್ಯತೆಯಿದೆ ಅಂತಾ ಹೇಳಿದ್ರು.