ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿರುವ ಬೆಳಗಾವಿ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭಾನುವಾರ ಭೇಟಿ ನೀಡುತ್ತಿದ್ದಾರೆ. ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
ಮಹಾಲಕ್ಷ್ಮೀ ದೇವಸ್ಥಾನ, ಕುಂಬಾರ ಗಲ್ಲಿ, ನದಿ ಗಲ್ಲಿ, ಮಠ ಗಲ್ಲಿ, ಹೊಸ ಓಣಿ, ಸುತಾರ ಗಲ್ಲಿ, ಪಿಂಜಾರ ಗಲ್ಲಿಗಳಲ್ಲಿ ನೀರು ನುಗ್ಗಿದ್ದು ಮನೆಗಳು ಜಲಾವೃತಗೊಂಡಿವೆ. ಆದ್ರೆ, ಸಿಎಂ ಈ ಭಾಗಕ್ಕೆ ಭೇಟಿ ನೀಡಿಲ್ಲ. ಮಹಾಲಕ್ಷ್ಮೀ ದೇವಸ್ಥಾನದ ಮುಂದೆ ಹರಿಯುತ್ತಿರುವ ಹಳ್ಳಕ್ಕೆ ಮಾತ್ರ ಭೇಟಿ ನೀಡಿದ್ರು. ಹೀಗಾಗಿ ಉಳಿದ ಭಾಗದ ಜನರಿಗೆ ನಿರಾಸೆಯಾಯ್ತು.
ಇನ್ನು ಚಿಕ್ಕೋಡಿ ತಾಲೂಕಿನ ವಿವಿಧ ಭಾಗಗಳಿಗೂ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ನೀಡಿದ್ರು. ಅಲ್ದೇ, ವೈಮಾನಿಕ ಸಮೀಕ್ಷೆ ನಡೆಸಿ ಮಾಹಿತಿ ಪಡೆದ್ರು. ಈ ವೇಳೆ ಡಿಸಿಎಂ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಸಚಿವರಾದ ಆರ್.ಅಶೋಕ, ಉಮೇಶ ಕತ್ತಿ, ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ, ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ ದರ್ಶನ ಹಾಗೂ ಎಸ್ಪಿ ಲಕ್ಷ್ಮಣ ನಿಂಬರಗಿ ಉಪಸ್ಥಿತರಿದ್ರು.