ಈ ಅಧಿವೇಶನಕ್ಕೆ ಅನೇಕ ಸವಾಲುಗಳು: ಕಾಗೇರಿ

199

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಈ ಬಾರಿಯ ಸುವರ್ಣಸೌಧದಲ್ಲಿ ನಡೆಯುವ ಅಧಿವೇಶನದಲ್ಲಿ ಸಾಕಷ್ಟು ಸವಾಲುಗಳಿವೆ ಎಂದು ಸಭಾಪತಿ ವಿಶ್ವವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಅಧಿವೇಶನದ ಪೂರ್ವ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಅತಿವೃಷ್ಟಿಯಿಂದ ಸಾಕಷ್ಟು ಹಾನಿಯಾಗಿದೆ. ಪುರಸಭೆ, ಪಟ್ಟಣ ಪಂಚಾಯ್ತಿ ಚುನಾವಣೆಗಳು ನಡೆಯಲಿವೆ. ಹೀಗಾಗಿ ಈ ಬಾರಿಯ ಅಧಿವೇಶನ ಸಾವಲಿನಿಂದ ಕೂಡಿದೆ. ಎಲ್ಲ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ. ಅಧಿವೇಶನಕ್ಕೆ ಬರುವ ಪ್ರತಿಯೊಬ್ಬರಿಗೂ ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಈ ಬಗ್ಗೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಲಾಪ ವೀಕ್ಷಣೆಗೆ ಅವಕಾಶವಿಲ್ಲ. ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಡಿಸೆಂಬರ್ 13ರಿಂದ 24ರ ತನಕ ಅಧಿವೇಶನ ನಡೆಯಲಿದೆ. 2018ರಿಂದ ಬೆಳಗಾವಿಯಲ್ಲಿ ಯಾವುದೇ ಅಧಿವೇಶನ ನಡೆದಿಲ್ಲವೆಂದು ಹೇಳಿದರು.




Leave a Reply

Your email address will not be published. Required fields are marked *

error: Content is protected !!