ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರ ಪ್ರಕರಣ

226

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಡೀ ರಾಜ್ಯವೇ ತಲೆ ತಗ್ಗಿಸುವಂತಹ ಘಟನೆ ಬೆಳಗಾವಿ ತಾಲೂಕಿನಲ್ಲಿ ಇತ್ತೀಚೆಗೆ ನಡೆದಿದೆ. ಇದನ್ನು ಖಂಡಿಸಿರುವ ಹೈಕೋರ್ಟ್, ಇದು ದುಶ್ಯಾಸನ ರಾಜ್ಯ. ಮಹಿಳೆ ನೆರವಿಗೆ ಯಾರೂ ಬಂದಿಲ್ಲ ಎಂದು ಚಾಟಿ ಬೀಸಿದೆ.

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ತೆಗೆದುಕೊಂಡ ಹೈಕೋರ್ಟ್ ಮುಖ್ಯ ನಾಯಮೂರ್ತಿ ಪ್ರಸನ್ ಬಾಲಚಂದ್ರ ವರಾಳೆ ಹಾಗೂ ಕೃಷ್ಣ.ಎಸ್ ದೀಕ್ಷಿತ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಸ್ವಾತಂತ್ರ್ಯ ಸಿಕ್ಕು 75 ವರ್ಷವಾದರೂ ಇಂತಹ ಘಟನೆ ನಡೆದಿದೆ. ಬಡ ಜನರಿಗೆ ರಕ್ಷಣೆ ಬೇಕಿದೆ. ಇಂತಹ ಸಮಾಜದಲ್ಲಿ ಬದುಕುವುದಕ್ಕಿಂತ ಸಾಯುವುದು ಮೇಲು ಎನ್ನುವ ಪರಿಸ್ಥಿತಿ ಬರದಂತೆ ನೋಡಿಕೊಳ್ಳಬೇಕಿದೆ ಎಂದರು.

ಮಹಿಳೆಯನ್ನು ಅತ್ಯಂತ ಹೀನಾಯವಾಗಿ ನಡೆಸಿಕೊಳ್ಳಲಾಗಿದೆ. ಮಹಿಳಾ ಆಯೋಗ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದರು. ಮಹಿಳೆ ಉತ್ತಮ ಚಿಕಿತ್ಸೆ, ಕೌನ್ಸಿಲಿಂಗ್ ನಡೆಸುವ ಅವಶ್ಯಕತೆ ಇದೆ. ಘಟನೆ ಸಂಬಂಧ ಪೊಲೀಸರು ತೆಗೆದುಕೊಂಡ ಕ್ರಮಗಳೇನು ಅನ್ನೋ ವರದಿ ಸಲ್ಲಿಸುವಂತೆ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರಿಗೆ ಸೂಚಿಸಿತು.




Leave a Reply

Your email address will not be published. Required fields are marked *

error: Content is protected !!