ಬೆಂಗಳೂರು: ಕಮರ್ಷಿಯಲ್ ಬ್ಯಾಂಕ್ ಗಳಲ್ಲಿ ರೈತರು ಮಾಡಿದ ಸಾಲವನ್ನ ಒಂದೇ ಕಂತಿನಲ್ಲಿ ಮನ್ನಾ ಮಾಡುವುದಕ್ಕೆ ಮೈತ್ರಿ ಸರ್ಕಾರ ಮಹತ್ವದ ಆದೇಶ ನೀಡಿದೆ.
ಬೆಳೆ ಸಾಲ, ಓವರ್ ಡ್ಯೂ ಸಾಲಗಳು ಸೇರಿದಂತೆ ಬೆಳೆಸಾಲ ಮನ್ನಾ ಯೋಜನೆಗೆ ಅರ್ಹತೆ ಇರುವ ಸಾಲಗಳನ್ನ ಒಂದೇ ಕಂತಿನಲ್ಲಿ ಮನ್ನಾ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರ ಜೊತೆಗೆ ಸಾಲ ಮನ್ನಾ ದೃಢೀಕರಣ ಪತ್ರವನ್ನ ರೈತರಿಗೆ ತಲುಪಿಸುವ ವ್ಯವಸ್ಥೆಯನ್ನ ಬಿಡುಗಡೆ ಮಾಡುವುದಾಗಿ ಸರ್ಕಾರ ತಿಳಿಸಿದೆ.