ಬೆಂಗಳೂರು: ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ 12ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಚಾಲನೆ ಸಿಕ್ಕಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ಇದೇ ವೇಳೆ ಚಲನಚಿತ್ರೋತ್ಸವದ ಸ್ಮರಣ ಸಂಚಿಕೆಯನ್ನ ರಾಕಿಂಗ್ ಸ್ಟಾರ್ ಯಶ ಬಿಡುಗಡೆ ಮಾಡಿದ್ದಾರೆ. ಪ್ರಾಸ್ತಾವಿಕವಾಗಿ ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷ ಸುನೀಲ ಪುರಾಣಿಕ ಮಾತ್ನಾಡಿದ್ದಾರೆ. ಕಾರ್ಯಕ್ರಮಕ್ಕೆ ದೀಪ ನೆರವು ನೀಡಿದ್ದು ನಟಿ ಅದಿತಿ ಪ್ರಭುದೇವ.
ಇನ್ನು ಕಾರ್ಯಕ್ರಮದಲ್ಲಿ ವಿಶೇಷ ಅತಿಯಾಗಿ ಹಿರಿಯ ನಟಿ ಜಯಪ್ರದಾ, ಖ್ಯಾತ ಗಾಯಕ ಸೋನು ನಿಗಮ್ ಸೇರಿದಂತೆ ಅನೇಕರು ಭಾಗವಹಿಸಿದ್ರು. ಒಂದು ವಾರಗಳ ಕಾಲ ಸಿನಿಮೋತ್ಸವ ನಗರದ ಓರಾಯನ್ ಮಾಲ್ ನಲ್ಲಿ ನಡೆಯಲಿದೆ. 50 ದೇಶಗಳ 200ಕ್ಕೂ ಹೆಚ್ಚು ಚಿತ್ರಗಳು ಪ್ರದರ್ಶನಗೊಳ್ಳಲಿವೆ.