ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿನ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದೆ. ಇದರಿಂದಾಗಿ ಹಲವು ಗ್ರಾಹಕರು ಗಾಯಗೊಂಡಿದ್ದಾರೆ. ಇಂದಿರಾನಗರದ ಕುಂದಲಹಳ್ಳಿ ಹತ್ತಿರದಲ್ಲಿ ಈ ಕೆಫೆ ಇದೆ.
ಹೋಟೆಲ್ ನಲ್ಲಿ ಇಟ್ಟಿದ್ದ ಬ್ಯಾಗ್ ವೊಂದರಿಂದ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ಫೋಟದ ಬಗ್ಗೆ ಸಧ್ಯಕ್ಕೆ ಮಾಹಿತಿ ಸಿಕ್ಕಿಲ್ಲ. ವಿಧಿ ವಿಜ್ಞಾನ ಪ್ರಯೋಗಾಲದ ತಜ್ಞರು ಪರಿಶೀಲಿಸುತ್ತಿದ್ದಾರೆ. ಅವರಿಂದ ವರದಿ ಬಂದ ಮೇಲೆ ಕಾರಣ ತಿಳಿದು ಬರಲಿದೆ ಎಂದಿದ್ದಾರೆ.