ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನಾ ಅಟ್ಟಹಾಸ ಜೋರಾಗಿದೆ. ಇದ್ರಿಂದಾಗಿ 200, 300 ಜನರಲ್ಲಿ ಸೋಂಕು ಕಾಣಿಸಿಕೊಳ್ಳವುದು ಸಾಮಾನ್ಯವಾಗಿದೆ. ಹೀಗಾಗಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಚಿವರೊಂದಿಗೆ ಚರ್ಚೆ ನಡೆಸಿ, ಸೋಂಕು ಪ್ರಕರಣಗಳು ಹೆಚ್ಚಿರುವ ಏರಿಯಾಗಳನ್ನ ಸೀಲ್ ಡೌನ್ ಮಾಡಲು ಸೂಚಿಸಲಾಗಿದೆ.
ನಗರದ ಚಿಕ್ಕಪೇಟೆ, ಚಾಮರಾಜಪೇಟೆ, ವಿದ್ಯಾರಣ್ಯಪುರ, ಆನಂದಪುರ, ಕಲಾಸಿಪಾಳ್ಯ, ಕೆ.ಆರ್ ಮಾರ್ಕೆಟ್, ಧರ್ಮಾಪುರ ಸೇರಿದಂತೆ ಸಿಲಿಕಾನ್ ಸಿಟಿಯಲ್ಲಿ ಹೆಚ್ಚು ಸೋಂಕು ಕಾಣಿಸಿಕೊಂಡ ಏರಿಯಾಗಳು ಸೀಲ್ ಡೌನ್ ಆಗ್ತಿವೆ. ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ 100 ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ಝೋನ್ ಮಾಡಲಾಗಿದೆ.
ಹೆಚ್ಚು ಜನಸಂಖ್ಯೆ ಇರುವ ವಾರ್ಡ್, ಮಾರ್ಕೆಟ್, ಬಡವಾಣೆ, ಅತಿ ಹೆಚ್ಚು ವ್ಯಾಪಾರ ವಹಿವಾಟು ನಡೆಯುವ ಪ್ರದೇಶಗಳನ್ನ ಸೀಲ್ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಜನರಿಗೆ ಎಷ್ಟೇ ಜಾಗೃತಿ ಮೂಡಿಸಿದ್ರೆ ಎಚ್ಚೆತ್ತುಕೊಳ್ತಿಲ್ಲ. ಇದರ ಪರಿಣಾಮ ಕೆಲವು ಕಡೆ ಸೀಲ್ ಡೌನ್ ಪರಿಸ್ಥಿತಿ ನಿರ್ಮಾಣವಾಗಿದೆ.