ಉಪೇಂದ್ರ ವಿರುದ್ಧ ಬೆಂಗಳೂರು ವಿವಿ ವಿದ್ಯಾರ್ಥಿಗಳ ಪ್ರತಿಭಟನೆ

259

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಜಾತಿ ನಿಂದನೆ ಅಡಿಯಲ್ಲಿ ನಟ ಉಪೇಂದ್ರ ವಿರುದ್ಧ ಎರಡು ಎಫ್ಐಆರ್ ದಾಖಲಾಗಿವೆ. ಹಲಸೂರು ಗೇಟ್ ಪೊಲೀಸ್ ಠಾಣೆ ಹಾಗೂ ಚನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಾಗಿವೆ. ಸಚಿವ ಹೆಚ್.ಸಿ ಮಹಾದೇವಪ್ಪ ಸೇರಿ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇನ್ನು ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ವಿವಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಗುತ್ತಿದ್ದು, ನಟ ಉಪೇಂದ್ರ ಬಂಧನಕ್ಕೆ ಆಗ್ರಹಿಸಲಾಗಿದೆ.

ಆಗಸ್ಟ್ 12ರಂದು ಸೋಷಿಯಲ್ ಮೀಡಿಯಾದಲ್ಲಿ ಲೈವ್ ನಲ್ಲಿ ಮಾತನಾಡುವಾಗಿ ಗಾದೆ ಮಾತೊಂದು ಹೇಳಿದ್ದರು. ಜಾತಿ ನಿಂದನೆಯ ಸೂಚಕವಾಗಿರುವ ಗಾದೆಮಾತು ಹೇಳಿದ್ದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಶನಿವಾರ ಫೇಸ್ ಬುಕ್ ನಲ್ಲಿ ಕ್ಷಮೆ ಕೋರಿದ್ದರು. ಸಮಾಜ ಕಲ್ಯಾಣ ಇಲಾಖೆಯಿಂದ ದೂರು ದಾಖಲಾಗಿದ್ದು, ಇಂದು ಬೆಂಗಳೂರು ವಿವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!