ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ
ಆಲಮೇಲ: ವಿಜಯಪುರ ಜಿಲ್ಲೆಯ ಕಡಣಿ ಗ್ರಾಮದ ಬೆರಗು ಪ್ರಕಾಶನವು ರಾಜ್ಯಮಟ್ಟದ ಪ್ರೊ.ಎಚ್.ಟಿ.ಪೋತೆ ಕಥಾ ಪ್ರಶಸ್ತಿ ನೀಡಲು ಹಸ್ತಪ್ರತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿ 5 ಸಾವಿರ ರೂಪಾಯಿ ನಗದು, ಪ್ರಶಸ್ತಿ ಫಲಕ ಸ್ಮರಣಿಕೆ ಒಳಗೊಂಡಿದೆ. ಆಯ್ಕೆಯಾದ ಹಸ್ತಪ್ರತಿಯನ್ನು ಪ್ರಕಾಶನದಿಂದ ಪ್ರಕಟಿಸಿ ಪ್ರಕಾಶನದ 5ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಚಾಲಕಿ ವಿಜಯಲಕ್ಷ್ಮಿ ಕತ್ತಿ ತಿಳಿಸಿದ್ದಾರೆ.
ಕನಿಷ್ಠ 10 ಕತೆಗಳನ್ನೊಳಗೊಂಡ ಹಸ್ತಪ್ರತಿಯು ನುಡಿ ಅಥವಾ ಬರಹದಲ್ಲಿ ಟೈಪ್ ಮಾಡಿದ ತಮ್ಮ ಅಪ್ರಕಟಿತ ಕೃತಿಯನ್ನು ಏಪ್ರಿಲ್ 30 ರೊಳಗೆ ತಲುಪುವಂತೆ ಕಳಿಸಲು ಕೋರಲಾಗಿದೆ.
ಬೆರಗು ಪುಸ್ತಕ ಪ್ರಶಸ್ತಿಗೆ ಪ್ರಕಟಿತ ಕೃತಿಗಳ ಆಹ್ವಾನ:
ದಿ.ಯಮುನಾಬಾಯಿ ರಾಜಣ್ಣ ಭೋವಿ ಸ್ಮರಣಾರ್ಥ ಅವರ ಹೆಸರಿನಲ್ಲಿ ಪ್ರತಿವರ್ಷ ನೀಡುವ ಬೆರಗು ಪ್ರಶಸ್ತಿ-2021 ನೀಡಲು 2021ನೇ ಸಾಲಿನಲ್ಲಿ ಪ್ರಕಟವಾದ ಸಾಹಿತ್ಯದ ಎಲ್ಲಾ ಪ್ರಕಾರಗಳ ಕೃತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು 5 ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ.
ಹಸ್ತಪ್ರತಿ ಮತ್ತು ಪುಸ್ತಕ ಕಳಿಸುವ ವಿಳಾಸ: ಡಾ. ರಮೇಶ ಎಸ್.ಕತ್ತಿ, ವಿನಾಯಕ ನಗರ, ಆಲಮೇಲ -586 202, ತಾ: ಆಲಮೇಲ, ಜಿಲ್ಲೆ: ವಿಜಯಪುರ, ಮೊ: 7795341335
ಆಸಕ್ತ ಲೇಖಕರು ತಮ್ಮ ಕೃತಿಯ ಎರಡು ಪ್ರತಿಗಳನ್ನು ಏಪ್ರಿಲ್ 30ರೊಳಗೆ ಸಲ್ಲಿಸಬೇಕು. ಪಿಎಚ್.ಡಿ ಪ್ರಬಂಧ ಹೊರತುಪಡಿಸಿ ಕನ್ನಡದ ಎಲ್ಲಾ ಪ್ರಕಾರದ ಪುಸ್ತಕಗಳನ್ನು ಪ್ರಶಸ್ತಿಗೆ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.