ಕೆಯುಡಿಗೆ ಅತ್ಯುನ್ನತ ಎನ್ಎಸ್ಎಸ್ ವಿವಿ ರಾಜ್ಯ ಪ್ರಶಸ್ತಿ

569

ಪ್ರಜಾಸ್ತ್ರ ಸುದ್ದಿ

ಧಾರವಾಡ: ಕರ್ನಟಕ ವಿಶ್ವವಿದ್ಯಾಲಯಕ್ಕೆ 2019-20ನೇ ಸಾಲಿನ ಅತ್ಯುನ್ನತ ಎನ್ಎಸ್ಎಸ್ ರಾಜ್ಯ ಪ್ರಶಸ್ತಿ ಒಲಿದಿದೆ. ರಾಜ್ಯ ಸರ್ಕಾರದ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಈ ಪ್ರಶಸ್ತಿ ನೀಡಿದೆ. ಕಾರ್ಯಕ್ರಮದ ಸಂಯೋಜನಾಧಿಕಾರಿ ಡಾ.ಎಂ.ಬಿ ದಳಪತಿ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಕೆ.ಸಿ ನಾರಾಯಣಗೌಡ, ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಶಾಲನಿ ರಜನೀಶ್ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು ಫಲಕ ಹಾಗೂ 50 ಸಾವಿರ ರೂಪಾಯಿ ನಗದು ಪುರಸ್ಕಾರವನ್ನು ಹೊಂದಿದೆ.


TAG


Leave a Reply

Your email address will not be published. Required fields are marked *

error: Content is protected !!