ಭಾರತ್ ಬಚಾವೋ ರ್ಯಾಲಿ

430

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ. ಇಂದು ರಾಮಲೀಲಾ ಮೈದಾನದಲ್ಲಿ ‘ಭಾರತ್ ಬಚಾವೋ’ ರ್ಯಾಲಿಯನ್ನ ಆಯೋಜಿಸಲಾಗಿದೆ. ಈ ರ್ಯಾಲಿಯಲ್ಲಿ ದೇಶಾದ್ಯಂತ ಇರುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸ್ತಿದ್ದಾರೆ.

ಮಂದಗತಿಯ ಆರ್ಥಿಕತೆ, ರೈತರ ಸಮಸ್ಯೆ, ನಿರುದ್ಯೋಗ ಸೇರಿದಂತೆ ಕೇಂದ್ರದ ಹಲವು ವೈಫಲ್ಯಗಳನ್ನ ಖಂಡಿಸಿ ಈ ಒಂದು ಹೋರಾಟ ಮಾಡಲಾಗ್ತಿದೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ ಸಂದೇಶ ಕಳಿಸುವ ಪ್ರಯತ್ನವಾಗಿದೆ. ಇದರಲ್ಲಿ ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ ಸಿಂಗ್, ಮಾಜಿ ಅಧ್ಯಕ್ಷ, ಸಂಸದ ರಾಹುಲ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!