ಪ್ರಜಾಸ್ತ್ರ ಸುದ್ದಿ
ರಾಯಚೂರು: ಭಾರತ್ ಜೋಡೋ ಯಾತ್ರೆಯ ಜಿಲ್ಲಾ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಗಲಾಟೆ ಮಾಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖಂಡರು ಗಲಾಟೆ ಮಾಡಿದ್ದಾರೆ.
ಸಭೆಯಲ್ಲಿ ಹಂಪನಗೌಡ ಬಾದರ್ಲಿ ಹಾಗೂ ಬಸನಗೌಡ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಮುಖಂಡರು ಕೈ ಕೈ ಮಿಲಾಯಿಸಿದ್ದಾರೆ. ಇದರಿಂದಾಗಿ ಇಡೀ ಸಭೆಯಲ್ಲಿ ದೊಡ್ಡ ಗಲಾಟೆ ನಡೆದಿದೆ.