ಪ್ರಜಾಸ್ತ್ರ ಸುದ್ದಿ
ಮಂಡ್ಯ: ಭಾರತ ಐಕ್ಯತಾ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿಗೆ ಸಕ್ಕರೆ ನಾಡಿನಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ. ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗೇಟ್ ಹತ್ತಿರ ಸೇರಿದ್ದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು.
ಈ ವೇಳೆ ವಿವಿಧ ಜಾನಪದ ಕಲಾ ತಂಡಗಳು ಪಾದಯಾತ್ರೆಗೆ ಮೆರಗು ತಂದವು. ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ. ಇಂದು ಮಧ್ಯಾಹ್ನ ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮೈಸೂರಿಗೆ ಆಗಮಿಸಲಿದ್ದಾರೆ.
ದಸರಾ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 4 ಹಾಗೂ 5ರಂದು ಯಾತ್ರೆಗೆ ವಿರಾಮ ನೀಡಲಿದ್ದಾರೆ. ಅಂದು ಕೊಡಗಿನ ಖಾಸಗಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ವೇಳೆ ರಾಜ್ಯ ಕಾಂಗ್ರೆಸ್ ನಾಯಕರು ಜೊತೆಯಾಗಲಿದ್ದು, ಮುಂಬರುವ ಚುನಾವಣೆಯ ಕುರಿತು ಚರ್ಚಿಸಲಿದ್ದಾರೆ. ಸೆಪ್ಟೆಂಬರ್ 6ರಂದು ಪಾಂಡವಪುರದಿಂದ ಪಾದಯಾತ್ರೆಗೆ ಮರುಚಾಲನೆ ಸಿಗಲಿದೆ.