‘ಸರ್ವಾಧಿಕಾರಿ ಸಾಮ್ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿದ ನ್ಯಾಯ ಯಾತ್ರೆ’

137

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆ ಈಗ ಅಸ್ಸಾಂನಲ್ಲಿ ಸಾಗುತ್ತಿದೆ. ಆದರೆ, ಅಲ್ಲಿ ಕಲ್ಲು ತೂರಾಟ, ದೇವಸ್ಥಾನದೊಳಗೆ ಬಿಡದೆ ಇರುವುದು, ಇಂದು ಪ್ರತಿಭಟನೆ ಸಹ ನಡೆದಿದೆ. ಇದನ್ನು ಖಂಡಿಸಿ ರಾಜ್ಯದಲ್ಲಿ ಕಾಂಗ್ರೆಸ್ ಎಲ್ಲೆಡೆ ಪ್ರತಿಭಟನೆ ನಡೆಸಿದೆ.

ಈ ಕುರಿತು ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ. ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಭಾರತ ಐಕ್ಯತಾ ನ್ಯಾಯ ಯಾತ್ರೆ ಬಿಜೆಪಿ ಸರ್ವಾಧಿಕಾರಿ ಸಾಮ್ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿದೆ. ಗೂಂಡಾಗಳನ್ನು ಬಿಟ್ಟು ಕಲ್ಲು ಹೊಡೆಸಿ, ಬೆದರಿಕೆ ಒಡ್ಡುವ ಮೂಲಕ ಭಾರತೀಯರ ನ್ಯಾಯದ ಕೂಗನ್ನು ಅಡಗಿಸಬಹುದು ಎಂದು ಭಾವಿಸಿದ್ದರೆ ಅದು ನಿಮ್ಮ ಭ್ರಮೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ರಾಹುಲ್ ಗಾಂಧಿ ಅವರ ಜೊತೆ ನಾನಿದ್ದೇನೆ. ನನ್ನಂತಹ ಕೋಟ್ಯಾಂತರ ಭಾರತೀಯರಿದ್ದಾರೆ. ಅನ್ಯಾಯದ ಕಾಡ್ಗಿಚ್ಚನ್ನು ಆರಿಸಿ, ನ್ಯಾಯದ ಹಣತೆ ಬೆಳಗುವವರೆಗೂ ನಾವು ವಿರಮಿಸುವುದಿಲ್ಲ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!