ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಭಾರತ ಐಕ್ಯತಾ ಯಾತ್ರೆಯಲ್ಲಿ ಮಾತನಾಡಿದ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್, ಇದು ಮನದ ಮಾತು ಕಾರ್ಯಕ್ರಮವಲ್ಲ. ಜನರ ಚಿಂತನೆಯ ಯಾತ್ರೆ. ಭಾರತ್ ಜೊಡೋದಲ್ಲಿ ಭಾಷಣವಿಲ್ಲ. ಮೌನದ ಪಾದಯಾತ್ರೆ ಎಂದರು.
ಆಶಾ ಕಾರ್ಯಕರ್ತೆಯರು, ನರೇಗಾ ಕಾರ್ಮಿಕರು ಸೇರಿದಂತೆ ಎಲ್ಲರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸುತ್ತೇವೆ. ಯಾವುದೇ ಕಾರಣಕ್ಕೂ ಯಾತ್ರೆ ನಿಲ್ಲುವುದಿಲ್ಲ. ಕೆಲವರು ಡಿಪಾರ್ಚರ್ ಲಾಂಜ್ ನಲ್ಲಿ ನಿಂತು ಹೇಳಿಕೆಗಳನ್ನು ಕೊಡುತ್ತಾರೆ. ಹೋಗುವವರು ಹೋಗಲಿ ಎಂದು ಗುಲಾಬ್ ನಬಿ ಆಜಾದ್ ಗೆ ತಿರುಗೇಟು ನೀಡಿದರು.
ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಪಾದಯಾತ್ರೆ 21 ದಿನ ರಾಜ್ಯದಲ್ಲಿ ಹಾದು ಹೋಗಲಿದೆ. ಇದರಲ್ಲಿ ಎಲ್ಲ ಸಂಸದರು, ಶಾಸಕರು, ಕಾರ್ಯಕರ್ತರು ಭಾಗವಹಿಸಬೇಕು. ದೇಶದ ಹಿತದೃಷ್ಟಿಯಿಂದ ಇದು ಅನಿವಾರ್ಯ ಎಂದರು.
ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ದಿಗ್ವಿಜಯ್ ಸಿಂಗ್, ಬಿ.ಕೆ ಹರಿಪ್ರಸಾದ್, ರಾಮಲಿಂಗಾರೆಡ್ಡಿ, ಎಂ.ಬಿ ಪಾಟೀಲ, ಎಚ್.ಕೆ ಪಾಟೀಲ ಸೇರಿದಂತೆ ಹಲವು ನಾಯಕರು ಭಾಗವಹಿಸಿ ಮಾತನಾಡಿದರು.