ಪ್ರಜಾಸ್ತ್ರ ಸುದ್ದಿ
ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ 10 ತಿಂಗಳು ಪೂರೈಯಿಸಿದೆ. ಆದರೂ, ಕೇಂದ್ರ ಸರ್ಕಾರ ಕ್ಯಾರೆ ಅನ್ನುತ್ತಿಲ್ಲ. ಹೀಗಾಗಿ ಸಂಯುಕ್ತ ಕಿಸಾನ್ ಮೋರ್ಚಾದಿಂದ ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ಜೋರಾಗಿದೆ.
ಪ್ರತಿಭಟನಗೆ 500ಕ್ಕೂ ಹೆಚ್ಚು ರೈತಪರ ಸಂಘಟನೆಗಳು, 15ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿದ್ದು, ದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಗ್ಗೆ 11 ಗಂಟೆಗೆ ಬೃಹತ್ ಮಟ್ಟದ ಪ್ರತಿಭಟನೆಗೆ ಸಜ್ಜಾಗಿವೆ. ಹೀಗಾಗಿ ಸಾಕಷ್ಟು ಬಂದೋಬಸ್ತ್ ಆಯೋಜಿಸಲಾಗಿದೆ.
ಗಡಿಗಳಲ್ಲಿ ಈಗಾಗ್ಲೇ ಪ್ರತಿಭಟನೆ ಶುರುವಾಗಿದೆ. ಹೀಗಾಗಿ ಎಲ್ಲರ ರೀತಿಯ ಬಿಗಿ ಭದ್ರತೆ ಒದಗಿಸಲಾಗಿದೆ. ಬೃಹತ್ ಪ್ರತಿಭಟನೆಯಿಂದಾಗಿ ರಸ್ತೆಗಳು ಸಂಪೂರ್ಣ ಬಂದ್ ಆಗಿದ್ದು, ವಾಹನ ಸವಾರರ ಪರದಾಟ ಶುರುವಾಗಿದೆ.