ಭೀಮಾ ಹಿನ್ನೀರಿನಲ್ಲಿ ಸಿಂದಗಿ ತಾಲೂಕಿನ ಬಾಲಕ ಸಾವು

781

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಭೀಮಾ ನದಿಯ ಪ್ರವಾಹದಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ ಭೀಮಾ ನದಿಗೆ ಹೊಂದಿಕೊಂಡಿರುವ ಗ್ರಾಮಗಳು ಮುಳುಗಡೆಯಾಗಿದ್ದು ಜನರನ್ನ ಕಾಳಜಿ ಕೇಂದ್ರಗಳಲ್ಲಿ ವ್ಯವಸ್ಥೆಮ ಮಾಡಲಾಗಿದೆ. ಇದರ ನಡುವೆ ಅನಾಹುತವೊಂದು ನಡೆದು ಹೋಗಿದೆ.

 ಭೀಮಾ ನದಿ ಹಿನ್ನೀರಿನ ಕೆಸರಿನಲ್ಲಿ ಸಿಲುಕಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕುರುಬತಹಳ್ಳಿಯಲ್ಲಿ ನಡೆದಿದೆ. 13 ವರ್ಷದ ಮಲ್ಲಿಕಾರ್ಜುನ ದೇಸಾಯಿ ಅನ್ನೋ ಬಾಲಕ ಮೃತಪಟ್ಟಿದ್ದಾನೆ.

ತಹಶೀಲ್ದಾರ್ ಸಂಜೀವಕುಮಾರ ದಾಸರ

ತಂದೆ ಜಗದೀಶ ಜೊತೆಗೆ ಮಲ್ಲಿಕಾರ್ಜುನ ಜಮೀನಿನಲ್ಲಿ ಕೆಲಸಕ್ಕೆ ಹೊರಟಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗ್ತಿದೆ. ಸ್ಥಳಕ್ಕೆ ತಹಶೀಲ್ದಾರ್ ಸಂಜೀವಕುಮಾರ ದಾಸರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ಕುರಿತು ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!