ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಮಂಗಳವಾರ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ. ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡಿದ್ದು, ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಸೋಷಿಯಲ್ ಮೀಡಿಯಾ ಸೇರಿದಂತೆ ಎಲ್ಲೆಡೆ ಕುಮಾರಸ್ವಾಮಿ, ದೇವೇಗೌಡ, ಜೆಡಿಎಸ್ ಪಕ್ಷದ ವಿರುದ್ಧ ಟೀಕಾಸ್ತ್ರ ಪ್ರಯೋಗವಾಗ್ತಿವೆ.
ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಮಸೂದೆ ವಿಚಾರದಲ್ಲಿ ಜೆಡಿಸ್ ನಿಲುವು ಏನು? ಯಾವ ಕಾರಣಕ್ಕೆ ಅಂಗೀಕಾರಕ್ಕೆ ನಾವು ಒಪ್ಪಿಗೆ ನೀಡಿದ್ವಿ ಅನ್ನೋದರ ಕುರಿತು ಹೆಚ್.ಡಿ ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡಿದ್ದಾರೆ.