ಶರಣಶ್ರೀ ಕಲ್ಲೇಶ ಸಮ್ಮೇಳನಾಧ್ಯಕ್ಷರು

466

ಬೆಳಗಾವಿ: ಬುದ್ಧ ಬಸವ ಅಂಬೇಡ್ಕರ್ ರಾಷ್ಟ್ರೀಯ ಸಾಂಸ್ಕೃತಿಕ ಸಮ್ಮೇಳನದ ಅಧ್ಯಕ್ಷರಾಗಿ ಶರಣಶ್ರೀ ಕಲ್ಲೇಶ ಕಲಮಡಿ ಆಯ್ಕೆ ಆಗಿದ್ದಾರೆ.

ಶ್ರೀ ಜಗದ್ಗುರು ದುರದುಂಡೇಶ್ವರ ಮಠ ಮತ್ತು ಕನ್ನಡಿಗರ ಸಾಹಿತ್ಯ ಮತ್ತು ಸಾಂಸ್ಕೃತಿಕ ಟ್ರಸ್ಟ್ ಸಹಯೋಗದಲ್ಲಿ ಬುದ್ಧ ಬಸವ ಅಂಬೇಡ್ಕರ್ ರಾಷ್ಟ್ರೀಯ ಸಾಂಸ್ಕೃತಿಕ ಸಮ್ಮೇಳನ ಜ್ಯೂನ್ 14ರಂದು ನಡೆಯಲಿದೆ. ಅಥಣಿ ತಾಲೂಕಿನ ಅಡಹಳಟ್ಟಿ ಶ್ರೀಮಠದ ಆವರಣದಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಇದರ ಸಮ್ಮೇಳನದ ಅಧ್ಯಕ್ಷರಾಗಿ ಅಡಳಟ್ಟಿಯ ಧಾರ್ಮಿಕ ಸೇವಾಕರ್ತ, ಬಸವ ಚೇತನ ಪ್ರಶಸ್ತಿ ಪುರಸ್ಕೃತರಾದ ಶರಣಶ್ರೀ ಕಲ್ಮೇಶ ಕಲಮಡಿ ಅವರನ್ನ ಆಯ್ಕೆ ಮಾಡಲಾಗಿದೆ.

ಬೆಳಗ್ಗೆ 11 ಗಂಟೆಗೆ ನಡೆಯುವ ಸಮ್ಮೇಳನದಲ್ಲಿ ಸಾಂಸ್ಕೃತಿಕ ಕಲಾ ಪ್ರದರ್ಶನ, ಧಾರ್ಮಿಕ ಚಿಂತನ, ಪತ್ರಿಕೆ ಬಿಡುಗಡೆ, ಪ್ರಶಸ್ತಿ ಪ್ರದಾನ ನಡೆಯಲಿದೆ. ಇದೇ ವೇಳೆ ಬುದ್ಧ ಬಸವ ಅಂಬೇಡ್ಕರ್ ಶಾಂತಿ ಸೌಹಾರ್ದ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಕಾರ್ಯಕ್ರಮಕ್ಕೂ ಮುನ್ನ ಧಾರ್ಮಿಕ ಗುರುಗಳು, ಪ್ರಗತಿಪರ ಚಿಂತಕರು, ಸಾಹಿತಿಗಳ ನೇತೃತ್ವದಲ್ಲಿ ಗ್ರಾಮದಲ್ಲಿ ಬೆಳಗ್ಗೆ 10 ಗಂಟೆಗೆ  ಸಮ್ಮೇಳನಾಧ್ಯಕ್ಷರ ಮೆರವಣಿಗೆ ಜರುಗಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಮಹಾದೇವ ಬಿರಾದಾರ ತಿಳಿಸಿದ್ದಾರೆ.


ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ ನೀಡಿದ ಗಣ್ಯರು

TAG


Leave a Reply

Your email address will not be published. Required fields are marked *

error: Content is protected !!