ಗಾಂಧಿ, ನೆಹರೂಗೆ ಮಸಿ ಬಳಿಯುವ ಪ್ರಯತ್ನ

167

ಪ್ರಜಾಸ್ತ್ರ ಸುದ್ದಿ

ನವದೆಹಲಿ: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮಾತನಾಡಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ದೇಶದ ಜನತೆಗೆ ಶುಭ ಕೋರಿದರು. ಇದೆ ವೇಳೆ, ತನ್ನ ರಾಜಕೀಯ ಪ್ರಚಾರಕ್ಕಾಗಿ ಕೇಂದ್ರ ಸರ್ಕಾರದಿಂದ ಗಾಂಧಿ, ನೆಹರೂಗೆ ಮಸಿ ಬಳಿಯುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿನ ಸಂಗತಿಗಳನ್ನು, ಭಾರತೀಯ ಪಡೆ ಮಾಡಿದ ತ್ಯಾಗಗಳನ್ನು ಕೀಳಾಗಿ ಕಾಣಲಾಗುತ್ತಿದೆ. ಗಾಂಧಿ, ನೆಹರು, ಆಜಾದ್, ಪಟೇಲ್ ಅವರಂತಹ ನಾಯಕರನ್ನು ದೂಷಿಸುವ ಕೇಂದ್ರ ಸರ್ಕಾರದ ಪ್ರತಿಯೊಂದ ಪ್ರಯತ್ನನ್ನು ಕಾಂಗ್ರೆಸ್ ವಿರೋಧಿಸುತ್ತದೆ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!