ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಗಡಿ ರಸ್ತೆಯಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ನಟಿ ಈ ಹಿಂದೆ ಸುಮಾರು 7 ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ರು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿಯೂ ಸಹ ಬರೆದುಕೊಂಡಿದ್ರು. ಬಿಗ್ ಬಾಸ್ ಸೀಸನ್ 3ರಲ್ಲಿ ಜಯಶ್ರೀ ರಾಮಯ್ಯ ಭಾಗವಹಿಸಿದ್ರು.
ನಟಿ ಜಯಶ್ರೀ ಉಪ್ಪು ಹುಳಿ ಖಾರ, ಕನ್ನಡ್ ಗೊತ್ತಿಲ್ಲ ಅನ್ನೋ ಚಿತ್ರಗಳಲ್ಲಿಯೂ ಸಹ ಕಾಣಿಸಿಕೊಂಡಿದ್ದಾರೆ. ಹಲವು ವರ್ಷಗಳಿಂದ ಖಿನ್ನತೆಗೆ ಒಳಗಾಗಿದ್ದ ನಟಿಗೆ ಚಿಕಿತ್ಸೆ ನೀಡಲಾಗಿತ್ತು. ಆದ್ರೂ ಅವರು ಆತ್ಮಹತ್ಯೆ ಹಾದಿ ಹಿಡಿದ್ದಾರೆ.