ಕುಷ್ಟರೋಗ ನಿಯಂತ್ರಣಾಧಿಕಾರಿ ಸಾವಿಗೆ ಬಿಗ್ ಟ್ವಿಸ್ಟ್

194

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ಕುಷ್ಟರೋಗ ನಿಯಂತ್ರಣಾಧಿಕಾರಿ ರೂಪಾ ಅವರ ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದು ಸಹಜ ಸಾವಲ್ಲ, ಇದೊಂದು ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮನೆಯಲ್ಲಿ ತೀವ್ರ ರಕ್ತಸ್ರಾವದಿಂದ ರೂಪಾ ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆ ವೇಳೆ ತಲೆಯಲ್ಲಿ ಗುಂಡು ಪತ್ತೆಯಾಗಿರುವುದು ಹಲವು ಅನುಮಾನ ಮೂಡಿಸಿದೆ.

ತಲೆಗೆ ಶೆಲ್ಪ್ ಬಡೆದು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ರೂಪಾ ಪತಿ ಡಾ.ರವಿ ವಿರುದ್ಧ ಕುಟುಂಬಸ್ಥರು ಕೊಲೆ ಆರೋಪ ಮಾಡಿದ್ದಾರೆ. ಹೀಗಾಗಿ ಹಲವು ಅನುಮಾನ ಮೂಡಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರೂಪಾ ಜಿಲ್ಲಾಸ್ಪತ್ರೆಯಲ್ಲಿ ಕೃಷ್ಟರೋಗ ನಿಯಂತ್ರಣಾಧಿಕಾರಿಯಾಗಿದ್ದರು. ಪತಿ ರವಿ ಮೂಳೆರೋಗ ತಜ್ಞರಾಗಿದ್ದು, ವಿಪಿ ಬಡಾವಣೆಯಲ್ಲಿ ಸ್ವಂತ ಕ್ಲಿನಿಕ್ ನಡೆಸುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!